ಬ್ರೇಕಿಂಗ್ ನ್ಯೂಸ್
12-02-21 12:43 pm Headline Karnataka News Network ಕ್ರೈಂ
ಹೊನ್ನಾವರ, ಫೆ.12 : ಅಮೆರಿಕದಲ್ಲಿ ಉದ್ಯೋಗ ಗಿಟ್ಟಿಸುವ ಆಸೆಗೆ ಬಿದ್ದ ಯುವತಿಯೊಬ್ಬಳು ಜಾಲತಾಣದ ವಂಚನೆಗೊಳಗಾಗಿ ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ನೇತ್ರಾವತಿ (25) ಹಣ ಕಳೆದುಕೊಂಡ ಯುವತಿ. ನರ್ಸಿಂಗ್ ಕೋರ್ಸ್ ಮಾಡಿದ್ದ ನೇತ್ರಾವತಿ ಕೆಲವು ವರ್ಷ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಲಾಕ್ಡೌನ್ ಬಳಿಕ ತಮ್ಮೂರಿಗೆ ಬಂದು, ಬೇರೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತಿದ್ದರು. ಮತ್ತೆ ವಿದೇಶದಲ್ಲೇ ಉದ್ಯೋಗ ಮಾಡುವ ಆಕಾಂಕ್ಷೆಯಿಂದ ಜಾಲತಾಣದಲ್ಲಿ ಅರ್ಜಿ ಹಾಕಿ, ಹುಡುಕಾಟದಲ್ಲಿ ತೊಡಗಿದ್ದರು. ಇದೇ ವೇಳೆ, ನೇತ್ರಾವತಿ ಇ-ಮೇಲ್ ಗೆ ಮೇಲ್ ಸಂದೇಶ ಬಂದಿದ್ದು ಅಮೆರಿಕದಲ್ಲಿ ನರ್ಸಿಂಗ್ ಉದ್ಯೋಗದ ಭರವಸೆ ನೀಡಿದ್ದರು. ಅದನ್ನು ನಂಬಿ ಅರ್ಜಿ ಹಾಕಿದ್ದ ನೇತ್ರಾವತಿ ಆರು ತಿಂಗಳಲ್ಲಿ ಸರದಿಯಂತೆ ಬರೋಬ್ಬರಿ 57.14 ಲಕ್ಷ ಕಳೆದುಕೊಂಡಿದ್ದಾರೆ.

ಅಪರಿಚಿತ ಇ-ಮೇಲ್ ಸಂದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ನಮೂದಿಸಿದ್ದರು. ಅದಕ್ಕೆ ಕರೆ ಮಾಡಿದ್ದ ನೇತ್ರಾವತಿ ತನ್ನ ಪರಿಚಯ ಹೇಳಿಕೊಂಡಿದ್ದರು. ಕರೆ ಸ್ವೀಕರಿಸಿದ್ದ ವಂಚಕರು, ಯುವತಿಗೆ ನೇರವಾಗಿ ಪ್ರಶ್ನೆ ಪತ್ರಿಕೆ ಕಳುಹಿಸಿಕೊಟ್ಟು ಇಂಟರ್ವ್ಯೂ ಎಂದು ಉತ್ತರಿಸುವಂತೆ ತಿಳಿಸಿದ್ದರು. ಉತ್ತರ ಪತ್ರಿಕೆಯ ಬಳಿಕ ಆರೋಪಿಗಳು ಪಾಸ್ಪೋರ್ಟ್, ವೀಸಾ, ವೈದ್ಯಕೀಯ ಪ್ರಮಾಣಪತ್ರ, ಆರೋಗ್ಯ ವಿಮೆ ಮುಂತಾದವುಗಳಿಗೆ ಶುಲ್ಕ, ತೆರಿಗೆ ಪಾವತಿಸಲು ಹೇಳಿದ್ದರು. ಇದನ್ನು ನಿಜವೆಂದೇ ನಂಬಿದ ನೇತ್ರಾವತಿ, ಆರೋಪಿಗಳು ನೀಡಿದ್ದ ವಿವಿಧ ಬ್ಯಾಂಕ್ ಖಾತೆಗಳಿಗೆ 2020ರ ಆ.13ರಿಂದ 2021ರ ಜ.17ರ ತನಕ ಹಂತ ಹಂತವಾಗಿ 57.14 ರೂ. ಲಕ್ಷ ಹಣ ಜಮೆ ಮಾಡಿದ್ದಾರೆ.

ಅಮೆರಿಕದಲ್ಲಿ ಭಾರೀ ಸಂಬಳದ ಉದ್ಯೋಗವನ್ನು ನಂಬಿ ತಮ್ಮ ಸಂಪಾದನೆ, ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ, ಬ್ಯಾಂಕ್ಗಳಲ್ಲಿ ಸಾಲ ಮಾಡಿ ಹಣ ಹೊಂದಿಸಿದ್ದ ನೇತ್ರಾವತಿಯವರು ಆರು ತಿಂಗಳ ಅವಧಿಯಲ್ಲಿ ಇಷ್ಟೆಲ್ಲಾ ಹಣ ಪಾವತಿಸಿದ್ದರೂ ನೇಮಕಾತಿ ಆದೇಶ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಹಿಂದೆ ಸಂಪರ್ಕಿಸಿದ ದೂರವಾಣಿ ನಂಬರಿಗೆ ಕರೆ ಮಾಡಿ ಕೇಳಿದರೆ, ಅವರಿಂದ ಯಾವುದೇ ರೀತಿಯ ಸ್ಪಷ್ಟನೆಯಾಗಲೀ ಹಣ ಮರಳಿಸುವ ಬಗ್ಗೆ ಪ್ರತಿಕ್ರಿಯೆಯೂ ಬರಲಿಲ್ಲ. ಇದರಿಂದ ನೇತ್ರಾವತಿಗೆ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು, ಕಾರವಾರದ ಸೈಬರ್ ಅಪರಾಧ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.
Read: Exclusive: ಕೆನಡಾದಲ್ಲಿ ನರ್ಸಿಂಗ್ ನೌಕರಿ ! ತಿಂಗಳಿಗೆ ಮೂರು ಲಕ್ಷ ವೇತನ ! ಉದ್ಯೋಗಕ್ಕೆ ನೋಂದಾಯಿಸಿದರೆ ಖೋತಾ !!
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm