ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm