ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm