ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm