ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm