ಬ್ರೇಕಿಂಗ್ ನ್ಯೂಸ್
23-02-21 07:44 pm Headline Karnataka News Network ಕ್ರೈಂ
ಬೆಂಗಳೂರು, ಫೆ.23: ಹೋಟೆಲ್ ಗಜಲೀ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ಮಾ.9ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಮುಂಬಯಿನ ವಿಲೆ ಪಾರ್ಲೆಯ ಗಜಾಲಿ ಹೋಟೆಲ್ ನಲ್ಲಿ 2016ರಲ್ಲಿ ಶೂಟೌಟ್ ನಡೆದಿತ್ತು. ಆ ಪ್ರಕರಣದಲ್ಲಿ ಮುಂಬಯಿ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದರು. ಅದೇ ಪ್ರಕರಣದಲ್ಲಿ ರವಿ ಪೂಜಾರಿ ಕೂಡ ಆರೋಪಿಯಾಗಿದ್ದು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
26 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಬೆಂಗಳೂರಿನ ಪೊಲೀಸರು ಎರಡು ವರ್ಷಗಳ ಹಿಂದೆ ಬಂಧಿಸಿ ತಂದಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದಲ್ಲಿರುವ ಪೂಜಾರಿಯನ್ನು ಅಗತ್ಯ ಬಿದ್ದಾಗ ಕರೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಗಜಾಲಿ ಶೂಟೌಟ್ ಸಂಬಂಧ ಮುಂಬೈ ಪೊಲೀಸರು ರವಿ ಪೂಜಾರಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 108 ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದೆ. 2007 ರಲ್ಲಿ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಬ್ನಮ್ ಡೆಲಪರ್ಸ್ ಉದ್ಯೋಗಿಗಳಾಗಿದ್ದ ಶೈಲಜಾ ಹಾಗೂ ರವಿ ಎಂಬವರ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದ್ದು ರವಿ ಪೂಜಾರಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿತ್ತು.
Gangster Ravi Pujari was brought to Mumbai from Bengaluru on February 23 and produced before a special court which remanded him in the custody of Mumbai police till March 9 in a case of firing in 2016.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm