ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm