ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm