ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm