ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm