ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm