ಬ್ರೇಕಿಂಗ್ ನ್ಯೂಸ್
19-08-20 04:07 pm Headline Karnataka News Network ಕ್ರೈಂ
ಮುಂಬೈ , ಆಗಸ್ಟ್ 19: ವೈದ್ಯೆಯೊಬ್ಬಳು ಪತಿ ಹಾಗೂ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಕೊರಡಿ ಪ್ರದೇಶದ ಓಂ ನಗರದಲ್ಲಿರುವ ಮನೆಯಲ್ಲಿ ವೈದ್ಯೆ ಡಾ. ಸುಷ್ಮಾ ರಾಣೆ (41) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೂ ಮೊದಲು ಪತಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಧೀರಜ್(42) ಹಾಗೂ 11 ವರ್ಷ ಹಾಗೂ 5 ವರ್ಷದ ಪುಟ್ಟ ಮಕ್ಕಳನ್ನು ಕೊಲೆ ಮಾಡಿದ್ದಾಳೆ.
ಪತಿ ಹಾಗೂ ಮಕ್ಕಳ ಮೃತದೇಹ ಬೆಡ್ ರೂಂ ನಲ್ಲಿರುವ ಬೆಡ್ ಮೇಲೆ ಬಿದ್ದಿದ್ದರೆ, ವೈದ್ಯೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕೊರಡಿ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ವೈದ್ಯೆಯ ಕುಟುಂಬದ ಜೊತೆ ವಾಸವಾಗಿದ್ದ 60 ವರ್ಷದ ಮಹಿಳೆ ಬೆಡ್ ರೂಮ್ ಬಾಗಿಲು ತಟ್ಟಿದರೂ ಯಾರೂ ಹೊರಬರದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ 2 ಸಿರಿಂಜ್ ಗಳು ಹಾಗೂ ಡೆತ್ ನೋಟ್ ಸಿಕಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೀವನದಲ್ಲಿ ಖುಷಿಯಿಲ್ಲ ಎಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದಾಗಿ ಸುಷ್ಮಾ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಪ್ರಾಥಮಿಕ ವರದಿಯ ಪ್ರಕಾರ, ಸುಷ್ಮಾ ತನ್ನ ಪತಿ ಹಾಗೂ ಮಕ್ಕಳನ್ನು ಪ್ರಜ್ಞಾಹೀನ ಸ್ಥಿತಿಗೆ ತರಲು ನಿದ್ರೆಯ ಮಾತ್ರೆಗಳನ್ನು ಆಹಾರದಲ್ಲಿ ನೀಡಿರಬಹುದು. ನಂತರ ಇಂಜೆಕ್ಷನ್ ಚುಚ್ಚಿ ಸಾಯಿಸಿರಬಹುದು ತಿಳಿದುಬಂದಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm