ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಚಾರ್ಮಾಡಿ ಘಾಟ್ ; ನಿಲ್ಲಿಸಿದ ಕಾರಿನಲ್ಲಿ ಮೃತದೇಹ ಪತ್ತೆ ! 

19-08-20 04:52 pm       Mangalore Reporter   ಕ್ರೈಂ

ಚಾರ್ಮಾಡಿ ಘಾಟ್ ನಲ್ಲಿ ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ. 

KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.