ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm