ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm