ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm