ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm