ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm