ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm