ಬ್ರೇಕಿಂಗ್ ನ್ಯೂಸ್
08-03-21 11:42 am Headline Karnataka News Network ಕ್ರೈಂ
ಬೆಳಗಾವಿ, ಮಾ 8: ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ ಬರೋಬ್ಬರಿ 6.675 ಟನ್ ಜಿಲೆಟಿನ್ ಕಡ್ಡಿ, ಡಿಟೋನೇಟರ್ಗಳನ್ನು ಜಿಲ್ಲೆಯ ಹೊನಗಾ ಗ್ರಾಮದ ಬಳಿ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಎರಡು ವಾಹನಗಳಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡದ ರಮೇಶ್ ಲಕ್ಕೋಟಿ, ರಾಜು ಶಿರಗಾವಿ, ಮುಗಳಿ ನಿವಾಸಿ ಅರುಣಮಠದ, ವಿನಯ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಿಂದ ಧಾರವಾಡ, ಗದಗ ಕಡೆ ಸ್ಫೋಟಕಗಳನ್ನು ಈ ನಾಲ್ವರು ಸಾಗಿಸುತ್ತಿದ್ದು, ಸ್ಫೋಟಕಗಳ ಮೌಲ್ಯ ನಾಲ್ಕು ಲಕ್ಷ ಎಂದು ಅಂದಾಜಿಸಲಾಗಿದೆ.
ಟಾಟಾ ಕ್ಯಾಂಟರ್, ಬೊಲೆರೊ ಪಿಕ್ಅಪ್ ವಾಹನಗಳಲ್ಲಿ ಇಷ್ಟು ಪ್ರಮಾಣದ ಸ್ಫೋಟಕಗಳನ್ನು ಬಂಧಿತರು ಸಾಗಿಸುತ್ತಿದ್ದರು. ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಸ್ಫೋಟಕ ಸಾಗಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಕಾಕತಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.


ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿತ್ತು. ಹಾಗೂ ಟಾಟಾ ಏಸ್ ವಾಹನ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ಸಂಭವಿಸಿತ್ತು. ಹಾಗೂ ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿತ್ತು.
ಚಿಕ್ಕಬಳ್ಳಾಪುರ ಘಟನೆಗೂ ಮುನ್ನ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕಿತ್ತು..ಆದರೆ ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ರೆ, ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಸ್ಫೋಟದ ತೀವ್ರತೆ ಹೇಗಿತ್ತು ಅಂದ್ರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದ್ದವು.
ಹೀಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರ್ಘಟನೆಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ದೊರೆತ ಜಿಲೆಟಿನ್ ಕಡ್ಡಿಗಳು ಆತಂಕ ಮೂಡಿಸಿವೆ.
Belagavi police have arrested four persons for transporting 6 tons of large gelatin explosives illegally.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm