ಬ್ರೇಕಿಂಗ್ ನ್ಯೂಸ್
08-03-21 11:42 am Headline Karnataka News Network ಕ್ರೈಂ
ಬೆಳಗಾವಿ, ಮಾ 8: ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ ಬರೋಬ್ಬರಿ 6.675 ಟನ್ ಜಿಲೆಟಿನ್ ಕಡ್ಡಿ, ಡಿಟೋನೇಟರ್ಗಳನ್ನು ಜಿಲ್ಲೆಯ ಹೊನಗಾ ಗ್ರಾಮದ ಬಳಿ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಎರಡು ವಾಹನಗಳಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡದ ರಮೇಶ್ ಲಕ್ಕೋಟಿ, ರಾಜು ಶಿರಗಾವಿ, ಮುಗಳಿ ನಿವಾಸಿ ಅರುಣಮಠದ, ವಿನಯ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಿಂದ ಧಾರವಾಡ, ಗದಗ ಕಡೆ ಸ್ಫೋಟಕಗಳನ್ನು ಈ ನಾಲ್ವರು ಸಾಗಿಸುತ್ತಿದ್ದು, ಸ್ಫೋಟಕಗಳ ಮೌಲ್ಯ ನಾಲ್ಕು ಲಕ್ಷ ಎಂದು ಅಂದಾಜಿಸಲಾಗಿದೆ.
ಟಾಟಾ ಕ್ಯಾಂಟರ್, ಬೊಲೆರೊ ಪಿಕ್ಅಪ್ ವಾಹನಗಳಲ್ಲಿ ಇಷ್ಟು ಪ್ರಮಾಣದ ಸ್ಫೋಟಕಗಳನ್ನು ಬಂಧಿತರು ಸಾಗಿಸುತ್ತಿದ್ದರು. ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಸ್ಫೋಟಕ ಸಾಗಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಕಾಕತಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.


ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿತ್ತು. ಹಾಗೂ ಟಾಟಾ ಏಸ್ ವಾಹನ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ಸಂಭವಿಸಿತ್ತು. ಹಾಗೂ ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿತ್ತು.
ಚಿಕ್ಕಬಳ್ಳಾಪುರ ಘಟನೆಗೂ ಮುನ್ನ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕಿತ್ತು..ಆದರೆ ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ರೆ, ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಸ್ಫೋಟದ ತೀವ್ರತೆ ಹೇಗಿತ್ತು ಅಂದ್ರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದ್ದವು.
ಹೀಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರ್ಘಟನೆಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ದೊರೆತ ಜಿಲೆಟಿನ್ ಕಡ್ಡಿಗಳು ಆತಂಕ ಮೂಡಿಸಿವೆ.
Belagavi police have arrested four persons for transporting 6 tons of large gelatin explosives illegally.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm