ಬ್ರೇಕಿಂಗ್ ನ್ಯೂಸ್
08-03-21 11:42 am Headline Karnataka News Network ಕ್ರೈಂ
ಬೆಳಗಾವಿ, ಮಾ 8: ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ ಬರೋಬ್ಬರಿ 6.675 ಟನ್ ಜಿಲೆಟಿನ್ ಕಡ್ಡಿ, ಡಿಟೋನೇಟರ್ಗಳನ್ನು ಜಿಲ್ಲೆಯ ಹೊನಗಾ ಗ್ರಾಮದ ಬಳಿ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಎರಡು ವಾಹನಗಳಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡದ ರಮೇಶ್ ಲಕ್ಕೋಟಿ, ರಾಜು ಶಿರಗಾವಿ, ಮುಗಳಿ ನಿವಾಸಿ ಅರುಣಮಠದ, ವಿನಯ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಿಂದ ಧಾರವಾಡ, ಗದಗ ಕಡೆ ಸ್ಫೋಟಕಗಳನ್ನು ಈ ನಾಲ್ವರು ಸಾಗಿಸುತ್ತಿದ್ದು, ಸ್ಫೋಟಕಗಳ ಮೌಲ್ಯ ನಾಲ್ಕು ಲಕ್ಷ ಎಂದು ಅಂದಾಜಿಸಲಾಗಿದೆ.
ಟಾಟಾ ಕ್ಯಾಂಟರ್, ಬೊಲೆರೊ ಪಿಕ್ಅಪ್ ವಾಹನಗಳಲ್ಲಿ ಇಷ್ಟು ಪ್ರಮಾಣದ ಸ್ಫೋಟಕಗಳನ್ನು ಬಂಧಿತರು ಸಾಗಿಸುತ್ತಿದ್ದರು. ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಸ್ಫೋಟಕ ಸಾಗಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಕಾಕತಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.


ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿತ್ತು. ಹಾಗೂ ಟಾಟಾ ಏಸ್ ವಾಹನ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ಸಂಭವಿಸಿತ್ತು. ಹಾಗೂ ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿತ್ತು.
ಚಿಕ್ಕಬಳ್ಳಾಪುರ ಘಟನೆಗೂ ಮುನ್ನ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕಿತ್ತು..ಆದರೆ ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ರೆ, ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಸ್ಫೋಟದ ತೀವ್ರತೆ ಹೇಗಿತ್ತು ಅಂದ್ರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದ್ದವು.
ಹೀಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರ್ಘಟನೆಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ದೊರೆತ ಜಿಲೆಟಿನ್ ಕಡ್ಡಿಗಳು ಆತಂಕ ಮೂಡಿಸಿವೆ.
Belagavi police have arrested four persons for transporting 6 tons of large gelatin explosives illegally.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm