ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am