ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm