ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
02-04-26 08:03 pm
HK News Staffer
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm