ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm