ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm