ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am