ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm