ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm