ಬ್ರೇಕಿಂಗ್ ನ್ಯೂಸ್
26-03-21 08:38 pm Headline Karnataka News Network ಕ್ರೈಂ
ಬೆಂಗಳೂರು, ಮಾ.26: ಆತ ಜೈಲಿನಲ್ಲಿದ್ದುಕೊಂಡೇ ಎಸಿಬಿ ಅಧಿಕಾರಿಯ ಹೆಸರಿನಲ್ಲಿ ಭ್ರಷ್ಟರನ್ನು ಬೇಟೆಯಾಡುತ್ತಿದ್ದ. ಯಾರು ಭ್ರಷ್ಟಾಚಾರದಿಂದ ಹಣ ಮಾಡುತ್ತಿದ್ದಾರೋ, ಅಂಥ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಯೆಂದು ಫೋನಾಯಿಸಿ ಹಣ ಪೀಕಿಸುತ್ತಿದ್ದ.
ಹೌದು.. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಬೆಳಗಾವಿ ಮೂಲದ ಮರಿಗೆಪ್ಪ ನಿಂಗಪ್ಪ ಕುಂಬಾರ (54) ಎಂಬಾತನನ್ನು ಬಾಡಿ ವಾರೆಂಟ್ ಪಡೆಯಲು ಈಗ ಚಿತ್ರದುರ್ಗ ಪೊಲೀಸರು ಬಂದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಎಂಬವರಿಗೆ ಮಾರ್ಚ್ 17ರಂದು ಈತ ಕರೆ ಮಾಡಿದ್ದ. ತಾನು ಎಸಿಬಿಯಲ್ಲಿ ಡಿವೈಎಸ್ಪಿಯಾಗಿದ್ದು, ನಿಮ್ಮ ಕಚೇರಿ ಮೇಲೆ ದಾಳಿ ನಡೆಸಲು ರೆಡಿ ಮಾಡ್ಕೊಂಡಿದ್ದೇವೆ ಎಂದು ಹೇಳಿದ್ದಾನೆ. ಅಲ್ಲದೆ, ತನ್ನ ಪ್ರಭಾವದ ಬಗ್ಗೆ ಮಾತನಾಡಿ, ವಿಶ್ವಾಸ ಗಳಿಸಿದ್ದಾನೆ. ಆಬಳಿಕ ಅಧಿಕಾರಿ ಸತೀಶ್ ರೆಡ್ಡಿ ಅಲ್ಲಿನ ಎಸಿಬಿ ಡಿವೈಎಸ್ಪಿ ಯಾರೆಂದು ವಿಚಾರಿಸಿದ್ದು, ಅವರ ಧ್ವನಿಗೂ ತನಗೆ ಫೋನ್ ಮಾಡಿದ್ದ ಧ್ವನಿಗೂ ತಾಳೆಯಾಗದ ಕಾರಣ ನೇರವಾಗಿ ಪೊಲೀಸ್ ದೂರು ನೀಡಿದ್ದರು.
![]()
ತನಿಖೆ ನಡೆಸಿದ ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿಯ ಲೊಕೇಶನ್ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲನ್ನು ತೋರಿಸಿತ್ತು. ತನಿಖೆ ನಡೆಸಿದ ಪೊಲೀಸರು ಮರಿಗೆಪ್ಪ ನಿಂಗಪ್ಪ ವೃತ್ತಾಂತ ನೋಡಿ ಸ್ವತಃ ಬೆಚ್ಚಿದ್ದಾರೆ. ಆತನ ಬಳಿ ಮೊಬೈಲ್, ಹಲವು ಸಿಮ್ ಕಾರ್ಡ್ ಗಳನ್ನು ಪತ್ತೆ ಮಾಡಿದ್ದಾರೆ. ಈಗ ಆತನನ್ನು ವಶಕ್ಕೆ ಪಡೆಯಲು ನ್ಯಾಯಾಲಯದಿಂದ ಬಾಡಿ ವಾರೆಂಟ್ ಪಡೆದಿದ್ದಾರೆ.
ಈ ಹಿಂದೆ ಹಿರಿಯೂರಿನ ಪಂಚಾಯತಿರಾಜ್ ಇಲಾಖೆಯ ಇಂಜಿನಿಯರನ್ನು ಇದೇ ರೀತಿ ಎಸಿಬಿ ಅಧಿಕಾರಿಯೆಂದು ಬೆದರಿಸಿ, ಹಣ ಕೇಳಿದ್ದ. ಪೊಲೀಸ್ ದೂರು ದಾಖಲಾಗಿ, ಸಿಕ್ಕಿಬಿದ್ದು ಈಗ ಜೈಲಿನಲ್ಲಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಹಿಂಡಲಗಾ ನಿವಾಸಿಯಾಗಿರುವ ಈತನ ಮೇಲೆ ರಾಜ್ಯದ ಹಲವೆಡೆ ಕೇಸುಗಳಿವೆ.

1990-2002ರ ಅವಧಿಯಲ್ಲಿ ಬೆಳಗಾವಿಯಲ್ಲಿ ಪೊಲೀಸ್ ಪೇದೆಯಾಗಿದ್ದ ಮರಿಗೆಪ್ಪ ಆಬಳಿಕ ಹತ್ತು ತಿಂಗಳ ಕಾಲ ಲೋಕಾಯುಕ್ತದಲ್ಲೂ ಕರ್ತವ್ಯ ನಿರ್ವಹಿಸಿದ್ದ. ಈ ವೇಳೆ, ಮಾಹಿತಿ ಕಲೆಹಾಕುವುದನ್ನು ಕಲಿತುಕೊಂಡಿದ್ದು ಈಗ ನೆರವಿಗೆ ಬಂದಿದೆ. ತಾನು ಫೋನ್ ಮಾಡಿ ಬೆದರಿಸುವುದಕ್ಕೂ ಮುನ್ನ ಅಧಿಕಾರಿಯ ಮಾಹಿತಿ ಕಲೆಹಾಕುತ್ತಾನೆ. ಆತ ಎಲ್ಲೆಲ್ಲಿ ಆಸ್ತಿ ಗಳಿಸಿಕೊಂಡಿದ್ದಾನೆ ಎನ್ನುವ ಮಾಹಿತಿ ತಿಳಿದೇ ಕರೆ ಮಾಡಿ ಬೆದರಿಸುತ್ತಾನೆ. ಪ್ರಭಾವಿಗಳ ಹೆಸರೇಳಿ, ರೈಡ್ ಮಾಡುವ ಸಿದ್ಧತೆಯ ಬಗ್ಗೆ ಹೇಳುತ್ತಾನೆ. ಈ ವೇಳೆ, ಬಲೆಗೆ ಬೀಳುವ ಭ್ರಷ್ಟ ಅಧಿಕಾರಿಗಳು ಆತನ ಖಾತೆಗೆ ಹಣ ಹಾಕುತ್ತಿದ್ದರು. ಕೆಲವೊಮ್ಮೆ ಯಾರನ್ನೋ ಕಳುಹಿಸಿ ನೇರವಾಗಿಯೂ ಹಣವನ್ನು ಸಂಗ್ರಹ ಮಾಡುತ್ತಿದ್ದನು.
ಪೊಲೀಸ್ ಕರ್ತವ್ಯದಲ್ಲಿದ್ದಾಗ ಬಸ್ ವಾರೆಂಟ್ ಪ್ರಕರಣದಲ್ಲಿ ದುರುಪಯೋಗ ಆಗಿ, ಎಫ್ಐಆರ್ ದಾಖಲಾಗಿತ್ತು. ಬಳಿಕ ಪೊಲೀಸ್ ಇಲಾಖೆಯಿಂದ ವಜಾ ಆಗಿದ್ದ ಮರಿಗೆಪ್ಪ ನಿಂಗಪ್ಪ ಹಣಕ್ಕಾಗಿ ಈ ರೀತಿಯ ಕೆಲಸಕ್ಕೆ ಮುಂದಾಗಿದ್ದ. ರಾಜ್ಯದ ಹಲವೆಡೆ ಈತನ ವಿರುದ್ಧ ಈ ರೀತಿಯ 20ಕ್ಕೂ ಹೆಚ್ಚು ವಂಚನೆ ಕೇಸುಗಳಿವೆ.
Bangalore DISMISSED COP Murugappa Ningappa Kumbara, CONS GOVERNMENT OFFICIALS as acb officer and loots money involving to
operate an extortion racket that used to target government officials in the guise of anti-corruption bureau officials.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm