ಬ್ರೇಕಿಂಗ್ ನ್ಯೂಸ್
30-03-21 10:47 am Mangalore Correspondent ಕ್ರೈಂ
ಕಡಬ, ಮಾ.30: ಪಾಪಿ ಸಮುದ್ರಕ್ಕೆ ಹೋದರೂ ಮೊಣಕಾಲುದ್ದ ನೀರು ಅಂತಾರಲ್ಲ. ಏಸಿಡ್ ದಾಳಿ ಪ್ರಕರಣದ ಆರೋಪಿಯೊಬ್ಬ ಸುಪ್ರೀಂ ಕೋರ್ಟ್ ಕದ ತಟ್ಟಿದರೂ, ನೆರವು ಸಿಗಲಿಲ್ಲ. ಆತ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದುಪಡಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಆದೇಶ ಮಾಡಿತ್ತು. ಈವರೆಗೆ ತಲೆಮರೆಸಿಕೊಂಡಿದ್ದ ಆರೋಪಿಯೇ ಸ್ವತಃ ಪೊಲೀಸರ ಮುಂದೆ ಶರಣಾಗಿದ್ದಾನೆ.
ಕಡಬದ ಕೋಡಿಂಬಾಳದಲ್ಲಿ ತನ್ನ ಸ್ವಂತ ನಾದಿನಿ ಮತ್ತು ಪುಟ್ಟ ಮಗು ಮೇಲೆ ಆ್ಯಸಿಡ್ ದಾಳಿ ನಡೆಸಿ ಕಾರಾಗ್ರಹದಲ್ಲಿದ್ದ ಆರೋಪಿ ಜಯಾನಂದರಿಗೆ ಇತ್ತೀಚೆಗೆ ಪುತ್ತೂರು ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಹೈಕೋರ್ಟಿನಲ್ಲಿ ಪ್ರಶ್ನಿಸಿ ಜಾಮೀನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಯಾನಂದರ ಜಾಮೀನು ರದ್ದುಗೊಳಿಸಿ ಅವರನ್ನು ಕೂಡಲೇ ಬಂಧಿಸುವಂತೆ ಕಡಬ ಪೊಲೀಸರಿಗೆ ಆದೇಶ ಮಾಡಿತ್ತು. ಈ ಮಧ್ಯೆ ಆರೋಪಿ ಜಯಾನಂದ ತಲೆಮರೆಸಿಕೊಂಡು ಸುಪ್ರೀಂ ಕೋರ್ಟಿನಲ್ಲಿ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯವು ವಜಾಗೊಳಿಸಿದ್ದು, ಇದೀಗ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

2020ನೇ ಜನರಿ 24ರಂದು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ಜಯಾನಂದ ಎಂಬವರು ತನ್ನ ತಮ್ಮನ ಹೆಂಡತಿ ಸ್ವಪ್ನಾ ಎಂಬವರಿಗೆ ಮತ್ತು ಅವರ ಜೊತೆಗಿದ್ದ ಪುಟ್ಟ ಮಗುವಿನ ಮೇಲೆ ಆ್ಯಸಿಡ್ ಎರಚಿದ್ದ. ಇದರಿಂದ ಸ್ವಪ್ನಾ ಹಾಗೂ ಅವರ ಮಗುವಿಗೆ ಗಾಯವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಜಯಾನಂದನಿಗೆ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿತ್ತು. ಆದರೆ ಈ ಜಾಮೀನನ್ನು ಪ್ರಶ್ನಿಸಿ ಸ್ವಪ್ನ ಆವರು ಹೈಕೋರ್ಟಿನ ಮೊರೆ ಹೋಗಿದ್ದರು. ಈ ಮಧ್ಯೆ ಆರೋಪಿ ತಲೆಮರೆಸಿಕೊಂಡು ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಎನ್ನಲಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದೀಗ ಜಯಾನಂದ ನೇರವಾಗಿ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Supreme court rejects bail plea of acid attacker of Kadaba orders for arrest but the accused has surrendered to the Police Station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm