ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm