ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.
ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm