ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm