ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm