ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:16 pm
HK News Staffer
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am