ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm