ಬ್ರೇಕಿಂಗ್ ನ್ಯೂಸ್
09-04-21 05:47 pm Bangalore Correspondent ಕ್ರೈಂ
ಬೆಂಗಳೂರು, ಏ 9 : ಚಾಕು, ಪೇಪರ್ ಕಟ್ಟರ್, ರೇಜರ್ ಇತರ ಹರಿತ ವಸ್ತುಗಳನ್ನು ಕಾಲಿನ ಮಣಿಗಂಟಿನ ಬಳಿ ಅಡಗಿಸಿಕೊಂಡಿದ್ದ 26 ವರ್ಷದ ಗರ್ಭಿಣಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.
ಯುವತಿಯನ್ನು ಅಸ್ಸಾಂ ಮೂಲದ ಉಮಾದೇವಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 7.10 ಕ್ಕೆ ಬೆಂಗಳೂರಿನಿಂದ ಗುವಾಹಟಿಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ದೇವಿ ಮತ್ತು ಆಕೆಯ ನಾಲ್ಕು ಕುಟುಂಬ ಸದಸ್ಯರು ತಪಾಸಣೆಗಾಗಿ ಮುಂಜಾನೆ 5.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಗರ್ಭಿಣಿಯ ನಡವಳಿಕೆ ಕಂಡು ಸಿಐಎಸ್ಎಫ್ ಅಧಿಕಾರಿಗಳು ಅನುಮಾನದಿಂದ ತಪಾಸಣೆ ತೀವ್ರಗೊಳಿಸಿದಾಗ ಆಕೆಯ ಎಡಕಾಲಿನ ಪಾದದ ಬಳಿ ಹರಿತವಾದ ವಸ್ತುಗಳಾದ ಪೇಪರ್ ಕಟ್ಟರ್, ಚಾಕು ,ಸಿಂಗಲ್ ಬ್ಲೇಡ್, ರೇಜರ್, ನೇಲ್ಕ್ಲಿಪ್ಪರ್, ಮೆಟಲ್ ಫೈಲರ್, ಇಕ್ಕಳ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.

ಆಕೆಯನ್ನು ವಿಚಾರಣೆ ನಡೆಸಿದಾಗ "ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದು, ನಮ್ಮ ಸಮುದಾಯದಲ್ಲಿ ಗರ್ಭಿಣಿಯರು ಹೊಟ್ಟೆಯ ಸುತ್ತಲೂ ಲೋಹದ ವಸ್ತುಗಳನ್ನು ಕಟ್ಟುವುದು ಸಂಪ್ರದಾಯ. ಹೊಟ್ಟೆಯ ಭಾಗಕ್ಕೆ ಕಟ್ಟಲು ಆತಂಕವಾಗಿ ತನ್ನ ಪಾದದ ಬಳಿ ಕಟ್ಟಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಪಾಸಣೆ ವೇಳೆ ಅಧಿಕಾರಿಗಳು ತಕ್ಷಣ ಇಂಡಿಗೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಹೆಚ್ಚುವರಿ ಪರಿಶೀಲನೆಗಾಗಿ ವಿಮಾನದಲ್ಲಿ ಕುಳಿತಿದ್ದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪತಿ ಸೇರಿದಂತೆ ಆಕೆಯ ಕುಟುಂಬಸ್ಥರು ಹಾಗೂ ಅವರ ಲಗೇಜ್ ಗಳನ್ನು ವಿಮಾನದಿಂದ ಇಳಿಸಿದ್ದಾರೆ.
ಶಂಕಿತೆ ಗರ್ಭಿಣಿ ವಿಮಾನದಲ್ಲಿ ಕಾಕ್ಪಿಟ್ಗೆ ಸಮೀಪವಿರುವ ಸೀಟ್ ನಂಬರ್ 1 ಎ ಬುಕ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ಆಕೆಯನ್ನು ಹಾಗೂ ಆಕೆಯ ಸಮುದಾಯ ಪದ್ಧತಿಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.
A 26-year-old pregnant woman passenger with a knife, paper cutter, razor and other sharp objects strapped to her ankle with duct tape, was arrested at the Kempegowda International Airport on Thursday.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm