ಬ್ರೇಕಿಂಗ್ ನ್ಯೂಸ್
09-04-21 10:15 pm Headline Karnataka News Network ಕ್ರೈಂ
ಬೆಂಗಳೂರು, ಎ.9 : ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ ನಟನೆಯ ಸೂಪರ್ ಹಿಟ್ ಚಿತ್ರ ಕಿರಿಕ್ ಪಾರ್ಟಿ. ಆದರೆ, ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಕಿರಿಕ್ ಪಾರ್ಟಿ ಚಿತ್ರತಂಡಕ್ಕೇ ಈಗ ಸಂಕಷ್ಟ ಎದುರಾಗಿದೆ. ಇಡೀ ಸಿನಿಮಾ ತಂಡದ ವಿರುದ್ಧ ಬೆಂಗಳೂರಿನ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಆರೋಪಿತರನ್ನು ಬಂಧಿಸಿ ಕರೆತರುವಂತೆ ಕೋರ್ಟ್ ಸೂಚಿಸಿದೆ. ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ರಿಷಬ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋಸ್ ಆರೋಪಿಗಳಾಗಿದ್ದು ಬಂಧನ ವಾರೆಂಟ್ ಜಾರಿಯಾಗಿದೆ. ಲಹರಿ ಸಂಸ್ಥೆಯಿಂದ ಇವರ ವಿರುದ್ಧ ದೂರು ನೀಡಿದ್ದು ಅನುಮತಿ ಇಲ್ಲದೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ತಮ್ಮ ಹಾಡನ್ನು ಅಕ್ರಮವಾಗಿ ಬಳಸಿಕೊಂಡಿದ್ದಾಗಿ ಆರೋಪಿಸಿ ದೂರು ನೀಡಿತ್ತು.

2016ರಲ್ಲಿ ಲಹರಿ ಸಂಸ್ಥೆ ಕಾಪಿ ರೈಟ್ ಆಕ್ಟ್ ಅಡಿ ದೂರು ದಾಖಲು ಮಾಡಿತ್ತು. ಸಿನಿಮಾ ಬಿಡುಗಡೆಯಾಗಿ 5 ವರ್ಷಗಳ ಬಳಿಕ ವಿಚಾರಣೆ ನಡೆದು ಈಗ ವಾರೆಂಟ್ ಜಾರಿಯಾಗಿದೆ.
ಒಟ್ಟು ತಂಡದ ವಿರುದ್ಧ 8 ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು. ಆದರೆ ಆರೋಪಿಗಳು ಒಮ್ಮೆಯೂ ಕೋರ್ಟ್ ಗೆ ಹಾಜರಾಗದ ಕಾರಣಕ್ಕೆ ಈ ಬಾರಿ ಬಂಧಿಸಿ ಕರೆತರುವಂತೆ ಕೋರ್ಟ್ ಆದೇಶ ನೀಡಿದೆ. ಮೇ 27ಕ್ಕೆ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರಿಗೆ ಸೂಚನೆ ನೀಡಿದೆ.

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ರವಿಚಂದ್ರನ್ ನಟನೆಯ ಶಾಂತಿ ಕ್ರಾಂತಿ ಚಿತ್ರದ ಮಧ್ಯರಾತ್ರೀಲಿ ಹಾಡನ್ನು ಬಳಸಿಕೊಳ್ಳಲಾಗಿದೆ ಎಂದು ಲಹರಿ ಸಂಸ್ಥೆ ಮುಖ್ಯಸ್ಥ ಲಹರಿ ವೇಲು ದೂರು ದಾಖಲಿದ್ದರು.
Rishab Shetty’s ‘Kirik Party’ starring Simple Star Rakshit Shetty is back in trouble. The court has issued a non-bailable warrant against the film. The 9th ACMM Court in Bangalore has issued a non-bailable warrant and ordered the arrest. Actor Rakshit Shetty, director Rishab Shetty, music director Ajanesh Lokanath and Paramwa Studios are accused. He was accused of illegally using the song in Kirk Party Cinema without permission from a drug agency.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm