ಬ್ರೇಕಿಂಗ್ ನ್ಯೂಸ್
13-04-21 02:46 pm Headline Karnataka News Network ಕ್ರೈಂ
ನವದೆಹಲಿ, ಎ.13: ಮಹಿಳೆ ಮತ್ತು ಆಕೆಯ ಪತಿ ಜೊತೆಯಾಗಿ ಜನನಿಬಿಡ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆದರೆ, ಅವನಿಗೆ ಅದೇನಾಯ್ತೋ ಏನೋ.. ದಿಢೀರ್ ಆಗಿ ಚಾಕು ಹೊರತೆಗೆದು ಆಕೆಯ ಮೇಲೆ ಯದ್ವಾತದ್ವಾ ಇರಿದಿದ್ದಾನೆ. ಸಾವಿರಾರು ಮಂದಿ ಓಡಾಡುವ ರಸ್ತೆಯಾಗಿದ್ದರಿಂದ ವಾಹನಗಳು ಅದೇ ರಸ್ತೆಯಲ್ಲಿ ಸರಣಿಯಂತೆ ಸಾಗುತ್ತಿದ್ದವು. ಅಕ್ಕಪಕ್ಕದ ಕಟ್ಟಡದಲ್ಲಿ ನಿಂತಿದ್ದ ಜನ ಇದನ್ನು ನೋಡುತ್ತಾ ವಿಡಿಯೋ ಮಾಡಿದ್ದರೇ ವಿನಾ ಯಾರು ಕೂಡ ತಡೆಯಲು ಬರಲಿಲ್ಲ. ಆರೋಪಿ ಇರಿದ ಬಳಿಕ ಏನೂ ಆಗದಂತೆ ನಡೆದು ಹೋಗಿದ್ದಾನೆ.

ಹೌದು.. ಈ ರೀತಿಯ ಭೀಭತ್ತ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ನಗರದಲ್ಲಿ. ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷ ಅಂದ್ರೆ, ಯುವತಿ ರಸ್ತೆಗೆ ಬಿದ್ದು ಸತ್ತ ಬಳಿಕವೂ ಆರೋಪಿ 25 ಬಾರಿ ಚಾಕುವಿನಿಂದ ಯದ್ವಾತದ್ವಾ ಇರಿದಿದ್ದಾನೆ.

ಮೃತ ಯುವತಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ನೀಲು ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿ, ನೀಲುವಿನ ಪತಿಯನ್ನು ಹರೀಶ್ ಮೆಹ್ತಾ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾರೇಜ್ ಬ್ಯೂರೋದಲ್ಲಿ ಉದ್ಯೋಗಿ ಆಗಿದ್ದ ಹರೀಶ್ ಮೆಹ್ತಾ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಇಬ್ಬರೂ ಗುಜರಾತಿನ ರಾಜಕೋಟ್ ನಿವಾಸಿಗಳಾಗಿದ್ದು, ದೆಹಲಿಯ ಬುದ್ಧ್ ವಿಹಾರ್ ಫೇಸ್ ಒಂದರಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಪತ್ನಿ ಬಗ್ಗೆ ಶಂಕೆ ಹೊಂದಿದ್ದ ಹರೀಶ್ ಮೆಹ್ತಾ ಈ ಕೃತ್ಯ ಮಾಡಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಭಾರೀ ವೈರಲ್ ಆಗಿದ್ದು ಪತಿಯೇ ಪತ್ನಿಯನ್ನು ಕೈಯಾರೆ ಭೀಭತ್ಸವಾಗಿ ಇರಿದು ಕೊಲ್ಲುವ ದೃಶ್ಯ ಮನಕಲಕುತ್ತಿದೆ.
A 26-year-old woman was stabbed to death by her husband, 40, at a crowded market place in Delhi's Rohini area on Saturday (April 10) on the suspicion of her having an affair with another person. The accused has been arrested by the Delhi Police.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am