ಬ್ರೇಕಿಂಗ್ ನ್ಯೂಸ್
13-04-21 02:46 pm Headline Karnataka News Network ಕ್ರೈಂ
ನವದೆಹಲಿ, ಎ.13: ಮಹಿಳೆ ಮತ್ತು ಆಕೆಯ ಪತಿ ಜೊತೆಯಾಗಿ ಜನನಿಬಿಡ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆದರೆ, ಅವನಿಗೆ ಅದೇನಾಯ್ತೋ ಏನೋ.. ದಿಢೀರ್ ಆಗಿ ಚಾಕು ಹೊರತೆಗೆದು ಆಕೆಯ ಮೇಲೆ ಯದ್ವಾತದ್ವಾ ಇರಿದಿದ್ದಾನೆ. ಸಾವಿರಾರು ಮಂದಿ ಓಡಾಡುವ ರಸ್ತೆಯಾಗಿದ್ದರಿಂದ ವಾಹನಗಳು ಅದೇ ರಸ್ತೆಯಲ್ಲಿ ಸರಣಿಯಂತೆ ಸಾಗುತ್ತಿದ್ದವು. ಅಕ್ಕಪಕ್ಕದ ಕಟ್ಟಡದಲ್ಲಿ ನಿಂತಿದ್ದ ಜನ ಇದನ್ನು ನೋಡುತ್ತಾ ವಿಡಿಯೋ ಮಾಡಿದ್ದರೇ ವಿನಾ ಯಾರು ಕೂಡ ತಡೆಯಲು ಬರಲಿಲ್ಲ. ಆರೋಪಿ ಇರಿದ ಬಳಿಕ ಏನೂ ಆಗದಂತೆ ನಡೆದು ಹೋಗಿದ್ದಾನೆ.

ಹೌದು.. ಈ ರೀತಿಯ ಭೀಭತ್ತ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ನಗರದಲ್ಲಿ. ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷ ಅಂದ್ರೆ, ಯುವತಿ ರಸ್ತೆಗೆ ಬಿದ್ದು ಸತ್ತ ಬಳಿಕವೂ ಆರೋಪಿ 25 ಬಾರಿ ಚಾಕುವಿನಿಂದ ಯದ್ವಾತದ್ವಾ ಇರಿದಿದ್ದಾನೆ.

ಮೃತ ಯುವತಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ನೀಲು ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿ, ನೀಲುವಿನ ಪತಿಯನ್ನು ಹರೀಶ್ ಮೆಹ್ತಾ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾರೇಜ್ ಬ್ಯೂರೋದಲ್ಲಿ ಉದ್ಯೋಗಿ ಆಗಿದ್ದ ಹರೀಶ್ ಮೆಹ್ತಾ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಇಬ್ಬರೂ ಗುಜರಾತಿನ ರಾಜಕೋಟ್ ನಿವಾಸಿಗಳಾಗಿದ್ದು, ದೆಹಲಿಯ ಬುದ್ಧ್ ವಿಹಾರ್ ಫೇಸ್ ಒಂದರಲ್ಲಿ ಬಾಡಿಗೆ ಮನೆಯಲ್ಲಿದ್ದರು.
ಪತ್ನಿ ಬಗ್ಗೆ ಶಂಕೆ ಹೊಂದಿದ್ದ ಹರೀಶ್ ಮೆಹ್ತಾ ಈ ಕೃತ್ಯ ಮಾಡಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಭಾರೀ ವೈರಲ್ ಆಗಿದ್ದು ಪತಿಯೇ ಪತ್ನಿಯನ್ನು ಕೈಯಾರೆ ಭೀಭತ್ಸವಾಗಿ ಇರಿದು ಕೊಲ್ಲುವ ದೃಶ್ಯ ಮನಕಲಕುತ್ತಿದೆ.
A 26-year-old woman was stabbed to death by her husband, 40, at a crowded market place in Delhi's Rohini area on Saturday (April 10) on the suspicion of her having an affair with another person. The accused has been arrested by the Delhi Police.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm