ಬ್ರೇಕಿಂಗ್ ನ್ಯೂಸ್
17-04-21 06:13 pm Headline Karnataka News Network ಕ್ರೈಂ
ಮಂಗಳೂರು, ಎ.17: ಮೂಡುಬಿದ್ರೆ ಪೊಲೀಸರು ಬಂಧಿಸಿರುವ ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ ಆರೋಪಿ. ಮೂಡುಬಿದ್ರೆ, ಬೆಳ್ತಂಗಡಿ, ಉಪ್ಪಿನಂಗಡಿ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ದರೋಡೆ ನಡೆಸುತ್ತಿದ್ದ ನಾಲ್ಕು ಗ್ಯಾಂಗ್ ಗಳನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 15 ಮಂದಿಯನ್ನು ಬಂಧಿಸಿದ್ದಲ್ಲದೆ, ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ 28 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.
ಪೊಲೀಸರ ತನಿಖೆ ಮುಂದುವರಿದಿದ್ದು, ದರೋಡೆ ತಂಡಕ್ಕೆ ವಿವಿಧೆಡೆ ಶೆಲ್ಟರ್ ಮತ್ತು ಹಣಕಾಸು ನೆರವು ನೀಡುತ್ತಿದ್ದ ಅಬ್ದುಲ್ ಬಶೀರ್ ನನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಸಮಾಜ ಸೇವಕನ ರೀತಿ ಪೋಸು ನೀಡುತ್ತಿದ್ದ ಅಬ್ದುಲ್ ಬಶೀರ್, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ. ದರೋಡೆ ತಂಡಕ್ಕೆ ವಾಹನ, ದರೋಡೆಯ ಬಳಿಕ ಅಡಗಿಕೊಳ್ಳಲು ಬೇರೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಅಬ್ದುಲ್ ಬಶೀರ್ ಸಂಚು ನಡೆಸಿದ್ದ ಆರೋಪ ಎದುರಿಸುತ್ತಿದ್ದಾನೆ.
Puttur Former Gram Panchyath Member has been arrested for Financially assisting a gang of robbers for Dacoity. The arrested has been identified as Abdul Basheer (40).
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm