ಬ್ರೇಕಿಂಗ್ ನ್ಯೂಸ್
17-04-21 06:13 pm Headline Karnataka News Network ಕ್ರೈಂ
ಮಂಗಳೂರು, ಎ.17: ಮೂಡುಬಿದ್ರೆ ಪೊಲೀಸರು ಬಂಧಿಸಿರುವ ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ ಆರೋಪಿ. ಮೂಡುಬಿದ್ರೆ, ಬೆಳ್ತಂಗಡಿ, ಉಪ್ಪಿನಂಗಡಿ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ದರೋಡೆ ನಡೆಸುತ್ತಿದ್ದ ನಾಲ್ಕು ಗ್ಯಾಂಗ್ ಗಳನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 15 ಮಂದಿಯನ್ನು ಬಂಧಿಸಿದ್ದಲ್ಲದೆ, ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ 28 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.
ಪೊಲೀಸರ ತನಿಖೆ ಮುಂದುವರಿದಿದ್ದು, ದರೋಡೆ ತಂಡಕ್ಕೆ ವಿವಿಧೆಡೆ ಶೆಲ್ಟರ್ ಮತ್ತು ಹಣಕಾಸು ನೆರವು ನೀಡುತ್ತಿದ್ದ ಅಬ್ದುಲ್ ಬಶೀರ್ ನನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಸಮಾಜ ಸೇವಕನ ರೀತಿ ಪೋಸು ನೀಡುತ್ತಿದ್ದ ಅಬ್ದುಲ್ ಬಶೀರ್, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ. ದರೋಡೆ ತಂಡಕ್ಕೆ ವಾಹನ, ದರೋಡೆಯ ಬಳಿಕ ಅಡಗಿಕೊಳ್ಳಲು ಬೇರೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಅಬ್ದುಲ್ ಬಶೀರ್ ಸಂಚು ನಡೆಸಿದ್ದ ಆರೋಪ ಎದುರಿಸುತ್ತಿದ್ದಾನೆ.
Puttur Former Gram Panchyath Member has been arrested for Financially assisting a gang of robbers for Dacoity. The arrested has been identified as Abdul Basheer (40).
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am