ಬ್ರೇಕಿಂಗ್ ನ್ಯೂಸ್
22-04-21 05:27 pm Mangalore Correspondent ಕ್ರೈಂ
ಮಂಗಳೂರು, ಎ.22: ಕೇರಳದಲ್ಲಿ ನಾಯಿಯನ್ನು ದರ ದರನೆ ಎಳ್ಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅದರ ಬಗ್ಗೆ ಮಾನವೀಯತೆ ಇಲ್ಲದವರು ಎಂಬ ಆಕ್ರೋಶವೂ ಕೇಳಿಬಂದಿತ್ತು. ಆದರೆ, ಈಗ ಅಂಥದ್ದೇ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲೂ ನಡೆದಿದೆ. ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಬೈಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಕೊಂಡು ಹೋಗುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ನೋಡಿದರೆ ಅಲ್ಲಿನ ಮೇಲ್ಸೇತುವೆಯಲ್ಲಿ ವಿಡಿಯೋ ಅಂತ್ಯವಾಗುತ್ತದೆ. ಬೈಕಿಗೆ ನಾಯಿಯನ್ನು ಕಟ್ಟಿದ್ದು, ಬೈಕಿನಲ್ಲಿ ಇಬ್ಬರು ಮಧ್ಯ ವಯಸ್ಕರು ಕುಳಿತಿದ್ದಾರೆ. ಇದನ್ನು ಇನ್ಯಾರೋ ಬೇರೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.
ಎಪ್ರಿಲ್ 15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವಿಡಿಯೋ ಈಗ ಭಾರೀ ಷೇರ್ ಆಗಿದ್ದು ಮನುಷ್ಯತ್ವ ಇಲ್ಲದೆ ವರ್ತಿಸಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಮಂಗಳೂರಿನ ಪೊಲೀಸರು ಇನ್ನೂ ಇದರ ಬಗ್ಗೆ ಎಚ್ಚತ್ತುಕೊಂಡಿಲ್ಲ.
ಕೇರಳದ ಮಲ್ಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ಇದೇ ಎಪ್ರಿಲ್ 15ರಂದು ಇದೇ ರೀತಿ ನಾಯಿಯನ್ನು ಒಬ್ಬಾತ ಬೈಕಿಗೆ ಕಟ್ಟಿ ಎಳ್ಕೊಂಡು ಹೋದ ಘಟನೆ ನಡೆದಿತ್ತು. ವಿಡಿಯೋ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕ್ಸೇವಿಯರ್ ಎನ್ನುವ 53 ವರ್ಷದ ಆರೋಪಿ, ಆತನ ಚಪ್ಪಲಿಯನ್ನು ಕಚ್ಚಿ ತುಂಡರಿಸಿದ್ದ ಕೋಪದಲ್ಲಿ ಮನೆಯಲ್ಲಿದ್ದ ನಾಯಿಯನ್ನು ರಸ್ತೆಯಲ್ಲಿ ಎಳ್ಕೊಂಡು ಹೋಗಿದ್ದ.
A pet dog was tied to a two-wheeler and dragged along a road at NITK Surathkal in Mangalore. The incident took place on April 15th, 2021. A video of the incident has gone viral.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm