ಬ್ರೇಕಿಂಗ್ ನ್ಯೂಸ್
22-04-21 05:27 pm Mangalore Correspondent ಕ್ರೈಂ
ಮಂಗಳೂರು, ಎ.22: ಕೇರಳದಲ್ಲಿ ನಾಯಿಯನ್ನು ದರ ದರನೆ ಎಳ್ಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅದರ ಬಗ್ಗೆ ಮಾನವೀಯತೆ ಇಲ್ಲದವರು ಎಂಬ ಆಕ್ರೋಶವೂ ಕೇಳಿಬಂದಿತ್ತು. ಆದರೆ, ಈಗ ಅಂಥದ್ದೇ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲೂ ನಡೆದಿದೆ. ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಬೈಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಕೊಂಡು ಹೋಗುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ನೋಡಿದರೆ ಅಲ್ಲಿನ ಮೇಲ್ಸೇತುವೆಯಲ್ಲಿ ವಿಡಿಯೋ ಅಂತ್ಯವಾಗುತ್ತದೆ. ಬೈಕಿಗೆ ನಾಯಿಯನ್ನು ಕಟ್ಟಿದ್ದು, ಬೈಕಿನಲ್ಲಿ ಇಬ್ಬರು ಮಧ್ಯ ವಯಸ್ಕರು ಕುಳಿತಿದ್ದಾರೆ. ಇದನ್ನು ಇನ್ಯಾರೋ ಬೇರೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.

ಎಪ್ರಿಲ್ 15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವಿಡಿಯೋ ಈಗ ಭಾರೀ ಷೇರ್ ಆಗಿದ್ದು ಮನುಷ್ಯತ್ವ ಇಲ್ಲದೆ ವರ್ತಿಸಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಮಂಗಳೂರಿನ ಪೊಲೀಸರು ಇನ್ನೂ ಇದರ ಬಗ್ಗೆ ಎಚ್ಚತ್ತುಕೊಂಡಿಲ್ಲ.
ಕೇರಳದ ಮಲ್ಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ಇದೇ ಎಪ್ರಿಲ್ 15ರಂದು ಇದೇ ರೀತಿ ನಾಯಿಯನ್ನು ಒಬ್ಬಾತ ಬೈಕಿಗೆ ಕಟ್ಟಿ ಎಳ್ಕೊಂಡು ಹೋದ ಘಟನೆ ನಡೆದಿತ್ತು. ವಿಡಿಯೋ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕ್ಸೇವಿಯರ್ ಎನ್ನುವ 53 ವರ್ಷದ ಆರೋಪಿ, ಆತನ ಚಪ್ಪಲಿಯನ್ನು ಕಚ್ಚಿ ತುಂಡರಿಸಿದ್ದ ಕೋಪದಲ್ಲಿ ಮನೆಯಲ್ಲಿದ್ದ ನಾಯಿಯನ್ನು ರಸ್ತೆಯಲ್ಲಿ ಎಳ್ಕೊಂಡು ಹೋಗಿದ್ದ.
A pet dog was tied to a two-wheeler and dragged along a road at NITK Surathkal in Mangalore. The incident took place on April 15th, 2021. A video of the incident has gone viral.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm