ಬ್ರೇಕಿಂಗ್ ನ್ಯೂಸ್
30-04-21 11:04 pm Mangaluru Crime correspondent ಕ್ರೈಂ
ಮಂಗಳೂರು, ಎ.30: ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿರುವ ನಿಸರ್ಗ ಬಾರ್ ಅಂಡ್ ರೆಸ್ಟೋರೆಂಟ್ ಗೆ ದಾಳಿ ನಡೆಸಿದ್ದು ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮದ್ಯದ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು 50 ಬಾಕ್ಸ್ ನಲ್ಲಿ ಅಡಗಿಸಿಟ್ಟಿದ್ದ 1.53 ಲಕ್ಷ ಮೌಲ್ಯದ ಮದ್ಯದ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ. ಈ ವೇಳೆ, ಬಾರ್ ನಲ್ಲಿದ್ದ ಚರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ನೀಡಿದ ಮಾಹಿತಿಯಂತೆ ಮದ್ಯವನ್ನು ತೊಕ್ಕೊಟ್ಟಿನ ಹೈ ಸ್ಪಿರಿಟ್ ನಿಂದ ತರಲಾಗಿತ್ತು. ಕಳೆದ ಮೂರು ತಿಂಗಳಿಂದ ಮದ್ಯವನ್ನು ಇಲ್ಲಿ ಸಂಗ್ರಹ ಮಾಡುತ್ತಿದ್ದು ಇಲ್ಲಿಂದ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.


ನಿಸರ್ಗ ಬಾರ್ ದಿವ್ಯರಾಜ್ ಶೆಟ್ಟಿ ಹೆಸರಲ್ಲಿ ಲೈಸನ್ಸ್ ಹೊಂದಿದ್ದು ರೋಹಿತ್ ಎಂಬವರು ಹೈಸ್ಪಿರಿಟ್ಸ್ ವೈನ್ ಶಾಪ್ ಮ್ಯಾನೇಜರ್ ಆಗಿದ್ದಾರೆ. ಇವರಿಬ್ಬರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಅಬಕಾರಿ ಕಾಯ್ದೆ ಪ್ರಕಾರ ಅಕ್ರಮವಾಗಿ ಮದ್ಯ ಸಂಗ್ರಹಿಸಿದ ವಿರುದ್ಧ ಮತ್ತು ಎಪಿಡಮಿಕ್ ಏಕ್ಟ್ ನಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯ ಸಂಗ್ರಹದಲ್ಲಿ ಬಾಸ್ ಹೆಸರಿನ ಬ್ಲಾಕ್ ಮತ್ತು ಗೋಲ್ಡ್ ವಿಸ್ಕಿ 1728 ಬಾಟಲ್ ಇದ್ದ 36 ಬಾಕ್ಸ್, 36 ಬಾಟಲ್ ಇದ್ದ ಬಿಜೋಯ್ಸ್ ವಿಸ್ಕಿ , 24 ಬಾಟಲ್ ಇದ್ದ ಡಿಎಸ್ ಪಿ ಬ್ಲಾಕ್ ಎರಡು ಬಾಕ್ಸ್ , 120 ಬಾಟಲ್ ಇದ್ದ ಹತ್ತು ಬಾಕ್ಸ್ ಬಾಸ್ ವಿಸ್ಕಿ ಇತ್ತೆಂದು ಪೊಲೀಸರು ತಿಳಿಸಿದ್ದಾರೆ.
The Mangalore city police raided Nisarga Bar & Restaurant near Talapady and seized 52 boxes of liquor worth Rs 1.53 lakhs was found stocked in a room without any valid bills.The cashier of the bar identified as Charan (22) was present in the room.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm