ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm