ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:12 pm
HK News Staffer
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am