ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm